ನವದೆಹಲಿ: ‘ಕೇಂದ್ರ ಸರ್ಕಾರದ ನಿಷ್ಕ್ರಿಯತೆಯಿಂದ ಲಸಿಕೆ ಕೊರತೆ ಉಂಟಾಗಿದೆ. ಭಾರತಕ್ಕೆ ತ್ವರಿತ ಮತ್ತು ಸಂಪೂರ್ಣ ವ್ಯಾಕ್ಸಿನೇಷನ್ನ ಅಗತ್ಯವಿದೆಯೇ ಹೊರತು ಬಿಜೆಪಿಯ ಸುಳ್ಳು ಘೋಷಣೆಗಳಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಟೀಕಿಸಿದ್ದಾರೆ.
‘ಕೇಂದ್ರ ಸರ್ಕಾರವು ಪ್ರಧಾನಿಯ ಮೋದಿ ಅವರ ಘನತೆಯನ್ನು ಉಳಿಸಲು ಪ್ರಯತ್ನಿಸುತ್ತಿದೆ. ಇದು ಸೋಂಕು ಹರಡಲು ಇನ್ನಷ್ಟು ಅವಕಾಶ ನೀಡುತ್ತಿದೆ ಮತ್ತು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ಅವರು ಟ್ವಿಟರ್ನಲ್ಲಿ ದೂರಿದ್ದಾರೆ.
ಸರ್ಕಾರವು ವಿಜ್ಞಾನಿಗಳ ಒಪ್ಪಿಗೆಯಿಲ್ಲದೆ ಅಸ್ಟ್ರಾಜೆನೆಕಾ ಕೋವಿಡ್ 19 ಲಸಿಕೆಯ ಎರಡು ಡೋಸ್ಗಳ ನಡುವಿನ ಅಂತರವನ್ನು ಹೆಚ್ಚಿಸಿದೆ ಎಂದು ಆರೋಪಿಸಿರುವ ವರದಿಯೊಂದನ್ನು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.