ADVERTISEMENT

ಕ್ಷಯರೋಗ ವಿರುದ್ಧದ ಹೋರಾಟ ಮುನ್ನಡೆಸಲು ಭಾರತ ಸಿದ್ಧ: ಮಾಂಡವೀಯ

ಪಿಟಿಐ
Published 25 ಮಾರ್ಚ್ 2023, 12:12 IST
Last Updated 25 ಮಾರ್ಚ್ 2023, 12:12 IST
ಮನ್‌ಸುಖ್ ಮಾಂಡವೀಯ
ಮನ್‌ಸುಖ್ ಮಾಂಡವೀಯ   

ನವದೆಹಲಿ: ಕ್ಷಯರೋಗದ ವಿರುದ್ಧದ ಹೋರಾಟವನ್ನು ಮುನ್ನಡೆಸಲು ಭಾರತ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಶನಿವಾರ ಹೇಳಿದ್ದಾರೆ.

ಉತ್ತರಪ್ರದೇಶದ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷಯರೋಗದ ಲಸಿಕೆಯನ್ನು ಅಭಿವೃದ್ಧಿಪಡಿಸುವ ಅಗತ್ಯ ಇದೆ ಎಂದೂ ಪ್ರತಿಪಾದಿಸಿದರು.

ಜಿ20ರ ಅಧ್ಯಕ್ಷತೆ ವಹಿಸಿಕೊಂಡಿರುವ ಭಾರತವು ಆರೋಗ್ಯ ಕ್ಷೇತ್ರದ ಮೂರು ಪ್ರಮುಖ ಆದ್ಯತೆಗಳನ್ನು ಗುರುತಿಸಿದೆ. ಇವೆಲ್ಲವೂ ಸಾರ್ವತ್ರಿಕ ಆರೋಗ್ಯದ ಮೇಲೆ ಕೇಂದ್ರೀಕೃತವಾಗಿವೆ ಮತ್ತು ಕ್ಷಯರೋಗ ನಿರ್ಮೂಲನೆಗೆ ಸಂಬಂಧಿಸಿವೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.