ADVERTISEMENT

ರಾಮಮಂದಿರ: ಪಾಕಿಸ್ತಾನದ‌ ಟೀಕೆಗೆ ಭಾರತ ಪ್ರತ್ಯುತ್ತರ

ಪಿಟಿಐ
Published 6 ಆಗಸ್ಟ್ 2020, 11:25 IST
Last Updated 6 ಆಗಸ್ಟ್ 2020, 11:25 IST
ಅಯೋಧ್ಯೆ ಪಟ್ಟಣ
ಅಯೋಧ್ಯೆ ಪಟ್ಟಣ   

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಟೀಕಿಸಿದ್ದ ಪಾಕಿಸ್ತಾನಕ್ಕೆ ಭಾರತವು ಕಟುವಾಗಿ ತಿರುಗೇಟು ನೀಡಿದೆ.

‘ಇದು ಭಾರತದ ಆಂತರಿಕ ವಿಷಯ. ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು. ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸುವುದರಿಂದ ಪಾಕಿಸ್ತಾನ ದೂರ ಇರಬೇಕು’ ಎಂದು ಭಾರತದವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ಹೇಳಿದ್ದಾರೆ.

‘ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಮತ್ತು ಅಲ್ಪಸಂಖ್ಯಾತರಿಗೆ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸಿರುವ ಪಾಕಿಸ್ತಾನ ಇಂತಹ ಹೇಳಿಕೆ ನೀಡುವುದು ಅಚ್ಚರಿ ಮೂಡಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದನ್ನು ಪಾಕಿಸ್ತಾನ ಬುಧವಾರ ಟೀಕಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.