ADVERTISEMENT

ಭಾರತದತ್ತ ಕೆಟ್ಟ ದೃಷ್ಟಿ ಬೀರಿದರೆ ತಕ್ಕ ಉತ್ತರ: ರಾಜನಾಥ್‌ ಸಿಂಗ್‌

ಪಿಟಿಐ
Published 16 ಅಕ್ಟೋಬರ್ 2022, 15:05 IST
Last Updated 16 ಅಕ್ಟೋಬರ್ 2022, 15:05 IST
ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌   

ನವದೆಹಲಿ: ಭಾರತವು ಯಾವತ್ತೂ ಯಾವುದೇ ದೇಶದ ಜನರಿಗೆ ನೋವುಂಟು ಮಾಡಲು ಪ್ರಯತ್ನಿಸಿಲ್ಲ. ಆದರೆ ದೇಶದ ಮೇಲೆ ಯಾರಾದರೂ ಕೆಟ್ಟ ದೃಷ್ಟಿ ಬೀರಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದ್ದಾರೆ.

ವರ್ಚುವಲ್ ಆಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಸವಾಲುಗಳನ್ನು ಎದುರಿಸಲು ದೇಶವು ಸಿದ್ಧವಾಗಿದೆ ಎಂದಿದ್ದಾರೆ.

‘ಭಾರತವು ಶಾಂತಿಪ್ರಿಯ ದೇಶವಾಗಿದೆ. ಇಲ್ಲಿನ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಪ್ರಯತ್ನ ನಡೆದರೆ, ಸೂಕ್ತ ಉತ್ತರ ನೀಡಲಾಗುವುದು’ ಎಂದೂ ಹೇಳಿದ್ದಾರೆ.

ADVERTISEMENT

ಸಶಸ್ತ್ರ ಪಡೆಗಳನ್ನು ಸ್ವದೇಶಿ ನಿರ್ಮಿತ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಬಲಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದೂ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.