ADVERTISEMENT

ಹಿಂದಿನಂತೆಯೇ ಅಫ್ಗನ್ನರ ಪರ ಭಾರತದ ನಿಲುವು: ಜೈಶಂಕರ್

ಪಿಟಿಐ
Published 13 ಸೆಪ್ಟೆಂಬರ್ 2021, 15:54 IST
Last Updated 13 ಸೆಪ್ಟೆಂಬರ್ 2021, 15:54 IST
ಜೈಶಂಕರ್
ಜೈಶಂಕರ್   

ನವದೆಹಲಿ: ‘ಅಫ್ಗಾನಿಸ್ತಾನವು ಗಂಭೀರವಾದ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಭಾರತವು ಹಿಂದಿನಂತೆಯೇ ಅಘ್ಗನ್ನರ ಪರವಾಗಿ ನಿಲ್ಲಲಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ ಉನ್ನತಮಟ್ಟದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು,‘ಯುದ್ಧದಿಂದ ಹಾನಿಗೊಳಗಾದ ಅಫ್ಗಾನಿಸ್ತಾನದ ಭವಿಷ್ಯದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು ಪ್ರಧಾನ ಪಾತ್ರ ವಹಿಸಲಿದೆ’ ಎಂದರು.

‘ನೆರೆಯ ರಾಷ್ಟ್ರವಾಗಿ ಭಾರತವು ಅಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಅಫ್ಗಾನಿಸ್ತಾನಕ್ಕೆ ಸಹಾಯ ಮಾಡಲು ಸಾಧ್ಯವಾದಷ್ಟು ಉತ್ತಮವಾದ ವಾತಾವರಣವನ್ನು ಸೃಷ್ಟಿಸಲು ಅಂತರರಾಷ್ಟ್ರೀಯ ಸಮುದಾಯವು ಒಗ್ಗೂಡಬೇಕು’ ಎಂದೂ ಜೈಶಂಕರ್ ಕರೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.