ADVERTISEMENT

ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2019, 4:23 IST
Last Updated 26 ಫೆಬ್ರುವರಿ 2019, 4:23 IST
   

ನವದೆಹಲಿ: ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಸರಿ ಸುಮಾರು 200 ಉಗ್ರರು ಹತರಾಗಿದ್ದರೆ ಎಂದು ಹೇಳಲಾಗಿದೆ. ಪಾಕ್ ಮೇಲೆ ದಾಳಿ ನಡೆಸುವ ನಿರ್ಧಾರ ಪ್ರಧಾನಿ ನರೇಂದ್ರ ಮೋದಿಯದ್ದಾಗಿತ್ತು ಎಂದು ನ್ಯೂಸ್ 18 ವರದಿ ಮಾಡಿದೆ.

ಗಡಿ ನಿಯಂತ್ರಣ ರೇಖೆಯಾಚೆ ಇರುವ ಬಲಾಕೋಟ್, ಚಕೋತಿ ಮತ್ತು ಮುಜಾಫರ್‌ಬಾದ್‍ನಲ್ಲಿದ್ದ ಉಗ್ರರ ನೆಲೆಗಳು ವೈಮಾನಿಕ ದಾಳಿಯಲ್ಲಿ ಸಂಪೂರ್ಣ ನಾಶವಾಗಿದೆ.ಜೈಷೆ ಸಂಘಟವೆಯ ನಿಯಂತ್ರಣಾ ಕೊಠಡಿ ಕೂಡಾ ಧ್ವಂಸವಾಗಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ADVERTISEMENT

ದಾಳಿ ಬಗ್ಗೆ ಇಲ್ಲಿಯವರೆಗೆ ಕೇಂದ್ರ ಸರ್ಕಾರದ ಮೂಲಗಳು ಯಾವುದೇ ಮಾಹಿತಿ ನೀಡಿಲ್ಲ.

ಕೃಷಿ ಸಚಿವಾಲಯದ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೆಖಾವತ್ವೈಮಾನಿಕ ದಾಳಿ ಬಗ್ಗೆ ಟ್ವೀಟಿಸಿದ್ದು ಮೋದಿಯವರನ್ನು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.