ADVERTISEMENT

ಕಾರ್ಗಿಲ್ ಕದನದಲ್ಲಿ ಹೋರಾಡಿದ್ದ ಯೋಧ ಮೃತಪಟ್ಟಿರುವುದು ದುಃಖದ ವಿಚಾರ: ಕಾಂಗ್ರೆಸ್

ಪಿಟಿಐ
Published 29 ಸೆಪ್ಟೆಂಬರ್ 2025, 13:04 IST
Last Updated 29 ಸೆಪ್ಟೆಂಬರ್ 2025, 13:04 IST
<div class="paragraphs"><p>ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್‌</p></div>

ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್‌

   

ಕೃಪೆ: ಪಿಟಿಐ

ನವದೆಹಲಿ: ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ನಿವೃತ್ತ ಯೋಧ ಸೆವಾಂಗ್‌ ಥಾರ್ಚಿನ್‌ ಅವರು ಲಡಾಖ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟಿರುವುದು ದುಃಖ ಹಾಗೂ ಆಕ್ರೋಶದ ಸಂಗತಿ ಎಂದು ಕಾಂಗ್ರೆಸ್‌ ಸೋಮವಾರ ಹೇಳಿದೆ.

ADVERTISEMENT

ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಥಾರ್ಚಿನ್‌ ಅವರು, 1999ರ ಕಾರ್ಗಿಲ್‌ ಕದನದಲ್ಲಿ ಹೋರಾಡಿದ್ದರು. ಅವರ ತಂದೆಯೂ, ಭಾರತೀಯ ಸೇನೆಯಲ್ಲಿದ್ದರು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ ಅವರು 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

'ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕಾಗಿ ಸೆವಾಂಗ್‌ ಥಾರ್ಚಿನ್‌ ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಐದು ದಿನಗಳ ಹಿಂದೆ ಹೋರಾಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇತರ ಮೂವರೊಂದಿಗೆ ಅವರೂ ಮೃತಪಟ್ಟಿರುವುದು ಅತ್ಯಂತ ದುಃಖದ ಮತ್ತು ತೀವ್ರ ಆಕ್ರೋಶದ ಸಂಗತಿ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲಡಾಖ್‌ ಹಿಂಸಾಚಾರದ ಬೆನ್ನಲ್ಲೇ ಲೇಹ್‌ ಪಟ್ಟಣದಲ್ಲಿ ಹೇರಲಾಗಿರುವ ಕರ್ಫ್ಯೂ ಮುಂದುವರಿದಿದೆ. ಲೆಫ್ಟಿನೆಂಟ್‌ ಗವರ್ನರ್‌ ಕವಿಂದರ್‌ ಗುಪ್ತಾ ಅವರ ನೇತೃತ್ವದಲ್ಲಿ ಲಡಾಖ್‌ನ ಭದ್ರತಾ ಪರಿಸ್ಥಿತಿಯ ಸಮಗ್ರ ಪರಿಶೀಲನಾ ಸಭೆ ನಡೆಯಲಿದೆ.

ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆ ಬೆನ್ನಲ್ಲೇ, ಸೆಪ್ಟೆಂಬರ್‌ 24ರಂದು ಲೇಹ್‌ನಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು.

ಘರ್ಷಣೆ ವೇಳೆ 80 ಪೊಲೀಸರೂ ಸೇರಿದಂತೆ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಇಬ್ಬರು ಕೌನ್ಸಿಲರ್‌ಗಳನ್ನೊಳಗೊಂಡಂತೆ 60 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪರಿಸರ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಸೆಪ್ಟೆಂಬರ್‌ 26ರಂದು ಬಂಧಿಸಲಾಗಿದ್ದು, ರಾಜಸ್ಥಾನದ ಜೋಧಪುರ ಜೈಲಿನಲ್ಲಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.