ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಒಟ್ಟು ₹12,328 ಕೋಟಿ ವೆಚ್ಚದ ಕೇಂದ್ರ ರೈಲ್ವೆ ಸಚಿವಾಲಯದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ.
ಈ ಪೈಕಿ ಬಹುಪಥ ರೈಲ್ವೆ ಯೋಜನೆಯಿಂದ ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಪ್ರಯೋಜನವಾಗಲಿದೆ.
ಇದರ ಜೊತೆಗೆ ಗುಜರಾತ್ನ ಕಚ್ನಲ್ಲಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಬಹುಪಥ ಯೋಜನೆಯು ಸುಮಾರು 3,108 ಹಳ್ಳಿಗಳಿಗೆ ಸಂಪರ್ಕವನ್ನು ಒದಗಿಸಲಿದ್ದು, ಅಂದಾಜು 47.34 ಲಕ್ಷ ಜನರಿಗೆ ಅನುಕೂಲವಾಗಲಿದೆ.
ಕರ್ನಾಟಕದ ಕಲಬುರಗಿ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಪ್ರಯೋಜನವನ್ನು ನೀಡುವ ಈ ಯೋಜನೆಯ ವೆಚ್ಚ ₹5012 ಕೋಟಿ ಆಗಿದೆ.
ಕರ್ನಾಟಕ ಮತ್ತು ತೆಲಂಗಾಣದಲ್ಲಿ ವ್ಯಾಪಿಸಿರುವ 173 ಕಿ.ಮೀ ಉದ್ದದ ಸಿಕಂದರಾಬಾದ್ (ಸನತ್ ನಗರ) 3ನೇ ಮತ್ತು 4ನೇ ಮಾರ್ಗದ ಪೂರ್ಣಗೊಳ್ಳುವ ಸಮಯ ಐದು ವರ್ಷವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.