ಮುಂಬೈ: ಗೋವಾದಿಂದ ಮುಂಬೈಗೆ ಬರುತ್ತಿದ್ದ ಇಂಡಿಗೊ ವಿಮಾನಕ್ಕೆ ಸೋಮವಾರ ಸಂಜೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನವು ಮುಂಬೈನಲ್ಲಿ ಇಳಿದ ಬಳಿಕ ನಿಲ್ದಾಣದ ಸಿಬ್ಬಂದಿ ತಪಾಸಣೆ ನಡೆಸಿದರು.
ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಘೋಷಿಸಲಾಗಿತ್ತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ನಿಯಮಾವಳಿಗಳನ್ನು ಪೂರೈಸಿದ ಬಳಿಕ ವಿಮಾನದ ಕಾರ್ಯಾಚರಣೆಗೆ ಮತ್ತೆ ಚಾಲನೆ ನೀಡಲಾಯಿತು ಎಂದು ಇಂಡಿಗೊ ಕಂಪನಿಯ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.