ಇಂದೋರ್: ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನ ಇಳಿದ ನಂತರ, ಪ್ರಯಾಣಿಕನನ್ನು ನಿಲ್ದಾಣ ಬಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಿದರು.
ಪ್ರಾಥಮಿಕ ಮಾಹಿತಿ ಪ್ರಕಾರ, ಪ್ರಯಾಣದ ಮಧ್ಯದಲ್ಲಿ ನೊಯ್ಡಾದ ಅತುಲ್ ಗುಪ್ತಾ (60) ಅವರ ಬಾಯಿಯಿಂದ ರಕ್ತಸ್ರಾವವಾಗಿ, ಆರೋಗ್ಯ ಸ್ಥಿತಿ ಹದಗೆಟ್ಟಿತು. ಗುಪ್ತಾ ಅವರನ್ನು ವಿಮಾನ ನಿಲ್ದಾಣದಿಂದ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಎಂದು ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ವೈದ್ಯರ ಪ್ರಕಾರ ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಅವರು ಬಳಲುತ್ತಿದ್ದರು ಎಂದು ಶರ್ಮಾ ಹೇಳಿದರು. ವಿಮಾನ ಸಂಜೆ 6.40ಕ್ಕೆ ನವದೆಹಲಿ ಹೊರಟಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.