ADVERTISEMENT

ನೇಪಾಳ ಪೊಲೀಸರ ಗುಂಡಿಗೆ ಭಾರತದ ವ್ಯಕ್ತಿ ಬಲಿ, ಮತ್ತೊಬ್ಬ ನಾಪತ್ತೆ

ಏಜೆನ್ಸೀಸ್
Published 5 ಮಾರ್ಚ್ 2021, 4:35 IST
Last Updated 5 ಮಾರ್ಚ್ 2021, 4:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಿಲಿಭಿತ್ (ಉತ್ತರಪ್ರದೇಶ): ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿವೇಳೆ ಗಾಯಗೊಂಡಿದ್ದ ಭಾರತದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಗೋವಿಂದ (26) ಎಂದು ಗುರುತಿಸಲಾಗಿದೆ. ಅವರು, ಪಪ್ಪು ಸಿಂಗ್‌ ಮತ್ತು ಗುರ್ಮೀತ್‌ ಸಿಂಗ್‌ ಎನ್ನುವವರೊಂದಿಗೆ ನೇಪಾಳಕ್ಕೆ ಪ್ರವೇಶಿಸಿದ್ದರು.ಮೂವರನ್ನು ನೇಪಾಳ ಪೊಲೀಸರು ತಡೆದಿದ್ದರು. ಈ ವೇಳೆವಾಗ್ವಾದ ನಡೆದಿದ್ದು, ಗೋವಿಂದ ಅವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರಕರಣ ಕುರಿತು ಮಾತನಾಡಿರುವ ಪಿಲಿಭಿತ್‌ನ‌ ಪೊಲೀಸ್‌ ಸೂಪರಿಂಟೆಂಡೆಂಟ್‌ ಜೈ ಪ್ರಕಾಶ್‌ ಅವರು, ʼಭಾರತದ ಮೂವರು ನೇಪಾಳ ಗಡಿ ಪ್ರವೇಶಿಸಿದ್ದಾರೆ ಹಾಗೂ ಅಲ್ಲಿನಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂಬ ವಿಚಾರ ತಿಳಿಯಿತು. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿದ್ದವ್ಯಕ್ತಿಯು ಆಸ್ಪತ್ರೆಗೆ ಸೇರಿಸುವ ವೇಳೆ ಮೃತಪಟ್ಟಿದ್ದಾನೆ. ಮತ್ತೊಬ್ಬ ಭಾರತದ ಗಡಿಯತ್ತ ಧಾವಿಸಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆʼ ಎಂದು ತಿಳಿಸಿದ್ದಾರೆ.

ADVERTISEMENT

ಘಟನೆ ಬಳಿಕ ಈ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು,ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.