ADVERTISEMENT

ಎಲ್‌ಒಸಿ ಮೂಲಕ ಒಳನುಸುಳುವಿಕೆಗೆ ಯತ್ನ: ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪಿಟಿಐ
Published 8 ಜುಲೈ 2022, 14:46 IST
Last Updated 8 ಜುಲೈ 2022, 14:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಒಳ ನುಸುಳುವಿಕೆಗೆ ಪ್ರಯತ್ನಿಸಿದ್ದ ಉಗ್ರನನ್ನು ಭದ್ರತಾ ಪಡೆಯ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಕಾರ್ಯಾಚರಣೆಯ ವೇಳೆ ಒಬ್ಬ ಯೋಧ ಕೂಡ ಹುತಾತ್ಮರಾಗಿ ರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಉತ್ತರ ಕಾಶ್ಮೀರ ಜಿಲ್ಲೆಯ ಕರ್ನಾಹ್ ಸೆಕ್ಟರ್‌ನ ಗುರಾನ್ ನಲ್ಲ ಅಮ್ರೋಹಿಯಲ್ಲಿನ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆಯ ಯತ್ನವನ್ನು ವಿಫಲಗೊಳಿಸಲಾಗಿದೆ. ಕಾರ್ಯಾಚರಣೆಯ ಸ್ಥಳದಿಂದ ಒಂದು ಎಕೆ ರೈಫಲ್, ಮೂರು ಎಕೆ ಮ್ಯಾಗಜೀನ್‌ಗಳು, 200 ಎಕೆ ಮದ್ದುಗುಂಡುಗಳು, ಮೂರು ಪಿಸ್ತೂಲ್‌ಗಳು, ನಾಲ್ಕು ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT