ADVERTISEMENT

ಐಎನ್‌ಎಸ್ ರಣವೀರ್‌ ನೌಕೆ ದುರಂತ: ಆಕಸ್ಮಿಕ ಸಾವು ಪ್ರಕರಣ ದಾಖಲು

ಪಿಟಿಐ
Published 19 ಜನವರಿ 2022, 10:09 IST
Last Updated 19 ಜನವರಿ 2022, 10:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್‌) ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಿಬ್ಬಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಅಧಿಕಾರಿಯೊಬ್ಬರು ಬುಧವಾರ ಮಾಹಿತಿ ನೀಡಿದ್ದಾರೆ.

ದಕ್ಷಿಣ ಮುಂಬೈನ ಕೋಲಾಬಾ ಪೊಲೀಸ್‌ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ ಎಂದೂ ಅವರು ಹೇಳಿದರು.

ಮೃತರನ್ನು ಅಧಿಕಾರಿಗಳಾದ ಕ್ರಿಶನ್‌ ಕುಮಾರ್‌, ಸುರೀಂದರ್‌ ಕುಮಾರ್‌ ಮತ್ತು ಎ.ಕೆ.ಸಿಂಗ್‌ ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣ ಪತ್ತೆ ಹಚ್ಚಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ನೌಕಾಪಡೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.