ADVERTISEMENT

ಮಹಾರಾಷ್ಟ್ರ ಸಿಎಂ ಶಿಂದೆಗೆ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ: ಭದ್ರತೆ ಹೆಚ್ಚಳ

ಪಿಟಿಐ
Published 2 ಅಕ್ಟೋಬರ್ 2022, 13:47 IST
Last Updated 2 ಅಕ್ಟೋಬರ್ 2022, 13:47 IST
ಏಕನಾಥ ಶಿಂದೆ
ಏಕನಾಥ ಶಿಂದೆ   

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಜೀವ ಬೆದರಿಕೆ ಇರುವ ಖಚಿತ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಶಿಂದೆ ಅವರಿಗೆ ಜೀವ ಬೆದರಿಕೆ ಇರುವ ಖಚಿತ ಮಾಹಿತಿ ರಾಜ್ಯ ಗುಪ್ತಚರ ಇಲಾಖೆಗೆ (ಎಸ್‌ಐಡಿ) ಶನಿವಾರ ಸಂಜೆ ಲಭ್ಯವಾಗಿತ್ತು. ಹೀಗಾಗಿ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ’ ಎಂದು ಎಸ್‌ಐಡಿ ಆಯುಕ್ತ ಆಶುತೋಷ್‌ದುಂಬ್ರೆ ತಿಳಿಸಿದ್ದಾರೆ.

ಝಡ್‌ ಪ್ಲಸ್‌ ಭದ್ರತೆಯ ಜೊತೆಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಠಾಣೆಯಲ್ಲಿರುವ ಶಿಂದೆ ಅವರ ಖಾಸಗಿ ನಿವಾಸ ಮತ್ತು ಮುಂಬೈನಲ್ಲಿರುವ ಅಧಿಕೃತ ನಿವಾಸಕ್ಕೆ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.