ADVERTISEMENT

ಅಂತರರಾಷ್ಟ್ರೀಯ ಬೆದರಿಕೆ ಕರೆ ಕುರಿತು ತನಿಖೆ: ಬಸವರಾಜ ಬೊಮ್ಮಾಯಿ

ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 20:30 IST
Last Updated 25 ಡಿಸೆಂಬರ್ 2019, 20:30 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಉಡುಪಿ: ಮಂಗಳೂರುಪೊಲೀಸರಿಗೆ ಅಂತರರಾಷ್ಟ್ರೀಯ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬುಧವಾರ ಶೌಚಾಲಯಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ವಿದೇಶಗಳಿಂದ ಹಾಗೂ ಸ್ಥಳೀಯವಾಗಿ ಬಂದಿರುವ ಬೆದರಿಕೆ ಕರೆಗಳ ತನಿಖೆ ಆರಂಭವಾಗಿದೆ’ ಎಂದರು.

ಈಚೆಗೆ ಕೇರಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಾರಿಗೆ ಅಡ್ಡಿಪಡಿಸಿದ್ದು ಖಂಡನೀಯ. ಈ ಘಟನೆಗೆ ಪ್ರತಿಯಾಗಿ ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿ ಮೇಲೆ ದಾಳಿ ನಡೆಸಿದ್ದರೆ, ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.