ADVERTISEMENT

ವಶಕ್ಕೆ ‍ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ: ಹೈಕೋರ್ಟ್‌ಗೆ ಸಿಬಿಐ ಹೇಳಿಕೆ

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ

ಪಿಟಿಐ
Published 25 ಜನವರಿ 2019, 12:38 IST
Last Updated 25 ಜನವರಿ 2019, 12:38 IST
ಪಿ.ಚಿದಂಬರಂ
ಪಿ.ಚಿದಂಬರಂ   

ನವದೆಹಲಿ:ಐಎನ್‌ಎಕ್ಸ್‌ ಮೀಡಿಯಾದಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವಾಗ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ಅಧಿಕಾರಿಗಳು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಪಿ. ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಸುನಿಲ್‌ ಗೌರ್‌ ಅವರ ಮುಂದೆ ಇ.ಡಿ ಮತ್ತು ಸಿಬಿಐ ಅಧಿಕಾರಿಗಳು ತಮ್ಮ ಮನವಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ತನ್ನ ಆದೇಶವನ್ನು ಕಾಯ್ದಿರಿಸಿದೆ.

ಪೀಟರ್‌ ಮುಖರ್ಜಿ ಹಾಗೂ ಪತ್ನಿ ಇಂದ್ರಾಣಿ ಒಡೆತನದ ಕಂಪನಿ ಐಎನ್‌ಎಕ್ಸ್‌ ಮೀಡಿಯಾ. ಈ ಕಂಪನಿಯಲ್ಲಿ ₹ 305 ಕೋಟಿ ವಿದೇಶಿ ಹೂಡಿಕೆಗೆ ಈ ಮೊದಲು ಕಾರ್ಯ ನಿರ್ವಹಿಸುತ್ತಿದ್ದ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್‌ಐಪಿಬಿ) ಅನುಮತಿ ನೀಡಿತ್ತು. ಅನುಮತಿ ನೀಡುವ ಸಂದರ್ಭದಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಎನ್ನಲಾಗಿದೆ. ಅಲ್ಲದೇ, ಈ ರೀತಿ ಅನುಮತಿ ನೀಡುವಲ್ಲಿ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರ ಪಾತ್ರವೂ ಇದೆ ಎಂದು ಸಿಬಿಐ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.