ಮುಂಬೈ: ಮುಂಬೈ ಕೋರ್ಟ್ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಗುರುವಾರ ಮುಂಬೈ ನಗರದಲ್ಲಿ ಕಾಣಿಸಿಕೊಂಡರು.
ಮಹಾರಾಷ್ಟ್ರದಲ್ಲಿ ಸುಲಿಗೆ ಪ್ರಕರಣದಲ್ಲಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಅವರು ತಾವು ಚಂಡೀಗಡದಲ್ಲಿ ಇದ್ದುದ್ದಾಗಿ ಹೇಳಿದರು. ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕರಿಸುವುದಾಗಿಯೂ ತಿಳಿಸಿದರು.
ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾದ ಮತ್ತು ಆಗಿನ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಮೇ ತಿಂಗಳಿನಿಂದ ಅವರು ಕೆಲಸಕ್ಕೆ ಹಾಜರಾಗಿಲ್ಲ.
ಬಂಧನದಿಂದ ರಕ್ಷಣೆ ಕೋರಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ನಿಲ್ಲಿಸಿದ್ದ ಎಸ್ಯುವಿಯಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಳಿಕ ಮುಂಬೈ ಪೊಲೀಸ್ ಆಧಿಕಾರಿ ಸಚಿನ್ ವಾಜೆ ಅವರನ್ನು ಬಂಧಿಸಲಾಗಿತ್ತು. ಅನಂತರ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.