ಪಟ್ನಾ: ಆರ್ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದರು.
‘ನಾವೆಲ್ಲ ಇಂಥ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇವೆ. ಇದರಲ್ಲಿ ಪಾಲ್ಗೊಂಡಿದ್ದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ. ನಾವು ಕೂಡ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ’ ಎಂದು ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್ ಕುನ್ವರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕಸುದ್ದಿಗಾರರಿಗೆ ತಿಳಿಸಿದರು.
ನಿತೀಶ್ ಕುಮಾರ್ ಅವರುಆರ್ಜೆಡಿ ಮುಖಂಡರು ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು ಬಿಹಾರದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.