ADVERTISEMENT

ತೆಲಂಗಾಣ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ಮನೆ ಮೇಲೆ ಐಟಿ ದಾಳಿ

ಪಿಟಿಐ
Published 9 ನವೆಂಬರ್ 2023, 5:56 IST
Last Updated 9 ನವೆಂಬರ್ 2023, 5:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹೈದರಾಬಾದ್: ಚುನಾವಣಾ ಹೊಸ್ತಿಲಲ್ಲಿರುವ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ ನವೆಂಬರ್ 30ರಂದು ನಡೆಯಲಿದೆ. ಶ್ರೀನಿವಾಸ ರೆಡ್ಡಿ ಅವರು ಖಮ್ಮಂ ಜಿಲ್ಲೆಯ ಪಾಲೇರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ADVERTISEMENT

ಮಾಧ್ಯಮ ವರದಿಗಳ ಪ್ರಕಾರ ಶ್ರೀನಿವಾಸ ರೆಡ್ಡಿ, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ನಡುವೆ ಐ.ಟಿ ಶೋಧ ನಡೆದಿದೆ.

ಶ್ರೀನಿವಾಸ ರೆಡ್ಡಿ ಮೇಲೆ ಐ.ಟಿ ದಾಳಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶಾನಲಯದ ಅಧಿಕಾರಿಗಳು ನಿರಂತರವಾಗಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಶ್ರೀನಿವಾಸ ರೆಡ್ಡಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.