ADVERTISEMENT

ಬದ್ರಿನಾಥ–ಕೇದಾರನಾಥ ದೇವಾಲಯಕ್ಕೆ ಐಟಿಬಿಪಿ ಪೊಲೀಸರ ಕಾವಲು

ಪಿಟಿಐ
Published 21 ಡಿಸೆಂಬರ್ 2022, 10:35 IST
Last Updated 21 ಡಿಸೆಂಬರ್ 2022, 10:35 IST
ಕೇದಾರನಾಥ ದೇವಾಲಯ
ಕೇದಾರನಾಥ ದೇವಾಲಯ   

ಡೆಹ್ರಾಡೂನ್‌: ಚಳಿಗಾಲದಲ್ಲಿ ಹಿಮದಿಂದ ಆವೃತವಾಗಿರುವ ಕೇದಾರನಾಥ ಮತ್ತು ಬದ್ರಿನಾಥ ದೇವಾಲಯಗಳ ಸುತ್ತಲೂ ಕಟ್ಟೆಚ್ಚರ ವಹಿಸಲು ಭಾರತ– ಟಿಬೆಟ್‌ ಗಡಿ ಪೊಲೀಸರನ್ನು (ಐಟಿಬಿಪಿ) ನಿಯೋಜಿಸಲಾಗಿದೆ ಎಂದು ದೇವಾಲಯದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕೇದಾರನಾಥ ದೇವಾಲಯದ ಹೊರ ಗೋಡೆಗೆ ಚಿನ್ನದ ಲೇಪನ ಮಾಡಲಾಗಿದೆ. ಚಳಿಗಾಲದಲ್ಲಿ ದೇವಾಲಯದ ಬಳಿ ಎತ್ತರ ಪ್ರದೇಶದಲ್ಲಿರುವ ನಿವಾಸಿಗಳು, ಕಡಿಮೆ ಹಿಮ ಬೀಳುವ ಕಡೆ ಸ್ಥಳಾಂತರಗೊಳ್ಳುತ್ತಾರೆ. ಆದ್ದರಿಂದ ಭದ್ರತಾ ದೃಷ್ಟಿಯಿಂದ ದೇವಾಲಯಕ್ಕೆ ಐಟಿಬಿಪಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಗೃಹ ಸಚಿವಾಲಯವನ್ನು ವಿನಂತಿಸಲಾಗಿತ್ತು. ಈಗ ಅದಕ್ಕೆ ಅನುಮೋದನೆ ದೊರಕಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT