ADVERTISEMENT

ಜಮ್ಮು ಮತ್ತು ಕಾಶ್ಮೀರ: ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಜಮ್ಮು ಮತ್ತು ಕಾಶ್ಮೀರ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 19:31 IST
Last Updated 1 ಡಿಸೆಂಬರ್ 2022, 19:31 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆಗಾಗಿ ಸೀಮಾ ನಿರ್ಣಯ ಸಮಿತಿಯನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ಸುಪ್ರಿಂ ಕೋರ್ಟ್‌ ಗುರುವಾರ ಕಾಯ್ದಿರಿಸಿದೆ. 

ಚುನಾವಣಾ ಆಯೋಗದ ಪರವಾಗಿ ಕೋರ್ಟ್‌ಗೆ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಅಭಯ್‌ ಎಸ್‌. ಓಕ ಅವರಿದ್ದ ಪೀಠವು ತೀರ್ಪನ್ನು ಕಾಯ್ದಿರಿಸಿತು. 

ಸರ್ಕಾರದ ಈ ನಿರ್ಧಾರವು ಸಾಂವಿಧಾನಿಕ ಅವಕಾಶಗಳ ಉಲ್ಲಂಘನೆಯಾಗಲಿದೆ ಎಂದು ಆಕ್ಷೇಪಿಸಿ ಹಾಜಿ ಅಬ್ದುಲ್‌ ಗನಿ ಖಾನ್‌ ಮತ್ತು ಮೊಹಮ್ಮದ್‌ ಆಯುಬ್ ಮಟ್ಟೂ ಅವರು ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.