ಜಲಪಾಯ್ಗುಡಿ: ಪಶ್ಚಿಮ ಬಂಗಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ.
ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ ಅಪಘಾತ ಸಂಭವಿಸಿದೆ.
ಈ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ನಿಧಿಯನ್ನು ಘೋಷಣೆ ಮಾಡಿದ್ದಾರೆ. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಸಹಾಯಧನ ಘೋಷಣೆ ಮಾಡಲಾಗಿದೆ.
ಪಶ್ಚಿಮ ಬಂಗಾಳದ ಜಲಪಾಯ್ಗುಡಿ ಜಿಲ್ಲೆಯ ಧೂಪ್ಗುರಿ ನಗರದಲ್ಲಿ ಅವಘಡ ಸಂಭವಿಸಿದೆ. ವಾಹನವೊಂದು ನಿಯಂತ್ರಣ ಕಳೆದುಕೊಂಡು ಟ್ರಕ್ಗೆ ಮುಖಾಮುಖಿ ಢಿಕ್ಕಿ ಹೊಡೆದು ವಿಭಜಕದ ಬಲ ಬದಿಗೆ ಸರಿದಿತ್ತು.
ಈ ಸಂದರ್ಭದಲ್ಲಿ ಎದುರಿನಿಂದ ಬಂದ ಎರಡು ವಾಹನಗಳು ಬಂಡೆಕಲ್ಲುಹೊತ್ತಿದ್ದಟ್ರಕ್ಗೆ ಡಿಕ್ಕಿ ಹೊಡೆದ ಸಂದರ್ಭ ಟ್ರಕ್ ವಾಹನದ ಮೇಲೆ ಮಗುಚಿದೆ. ಎಲ್ಲ ನಾಲ್ಕು ವಾಹನಗಳು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ, ಪಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಧನ ಸಹಾಯ ಘೋಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.