ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸಿಡಿಸಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ’ ಎಂದು ಪೊಲೀಸರು ತಿಳಿಸಿದರು.
‘ದಕ್ಷಿಣ ಕಾಶ್ಮೀರದ ಪಜಲ್ಪೋರಾ ಪ್ರದೇಶದಲ್ಲಿಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಈ ಸ್ಫೋಟದಲ್ಲಿನಾಗರಿಕರ ವಾಹನಗಳಿಗೂ ಹಾನಿಯಾಗಿವೆ. ಆದರೆ ಸಾವು–ನೋವು ಸಂಭವಿಸಿಲ್ಲ’ ಎಂದು ಅವರು ಹೇಳಿದರು.
‘ಈ ಬಳಿಕ ಭದ್ರತಾ ಪಡೆಯು ಗಾಳಿಯಲ್ಲಿ ಕೆಲವು ಸುತ್ತು ಗುಂಡು ಹಾರಿಸಿದೆ. ಸದ್ಯ ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.