ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸೋಮವಾರ ಶ್ರೀನಗರದ ಶೇರ್-ಇ-ಕಾಶ್ಮೀರ ಅಂತರರಾರಾಷ್ಟ್ರೀಯ ಕನ್ವೆನ್ಷನ್ ಕೇಂದ್ರದಲ್ಲಿ (ಎಸ್ಕೆಐಸಿಸಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಭಾಷಣಕ್ಕೂ ಮುನ್ನ, ಗುಂಡುನಿರೋಧಕ (ಬುಲೆಟ್ ಪ್ರೂಫ್) ಗಾಜಿನ ಕವಚವನ್ನು ತೆಗೆದುಹಾಕಿದರು.
‘ಇಂದು ನಾನು ನಿಮ್ಮೊಂದಿಗೆ ಮುಕ್ತವಾಗಿ ಮಾತನಾಡಲು ಬಯಸುತ್ತೇನೆ. ಅದಕ್ಕಾಗಿಯೇ ಇಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ಅಥವಾ ಭದ್ರತೆ ಇಲ್ಲ. ನಾನೀಗ ನಿಮ್ಮ ಮುಂದೆ ನಿಮ್ಮಂತೆಯೇ ನಿಂತಿದ್ದೇನೆ’ ಎಂದು ಶಾ ಅವರು ಹೇಳಿದರು.
ಶಾ ಅವರು ಕಾಶ್ಮೀರಿ ಗೌನ್ ಫೆರಾನ್ ಧರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.