ADVERTISEMENT

ಜಮ್ಮು-ಕಾಶ್ಮೀರ: ಮುಂದುವರಿದ ಶೋಧ ಕಾರ್ಯಾಚರಣೆ, ಮೂವರು ವಶಕ್ಕೆ

ಪಿಟಿಐ
Published 17 ಅಕ್ಟೋಬರ್ 2021, 8:34 IST
Last Updated 17 ಅಕ್ಟೋಬರ್ 2021, 8:34 IST
ಪೂಂಛ್‌ ಭಾಗದ ನಾರ್‌ ಖಾಸ್ ಅರಣ್ಯ ಭಾಗದಲ್ಲಿ ವಾಹನವೊಂದರ ತಪಾಸಣೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ
ಪೂಂಛ್‌ ಭಾಗದ ನಾರ್‌ ಖಾಸ್ ಅರಣ್ಯ ಭಾಗದಲ್ಲಿ ವಾಹನವೊಂದರ ತಪಾಸಣೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ   

ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್‌ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ–ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಒಂದೆರಡು ಬಾರಿ ಈ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಒಟ್ಟು ಒಂಭತ್ತು ಯೋಧರು ಹುತಾತ್ಮರಾಗಿದ್ದಾರೆ.

ಭಟ್ಟಾ ದುರಿಯನ್‌ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇವರು, ಸ್ವಯಂಪ್ರೇರಿತವಾಗಿ ನೆರವು ನೀಡಿದ್ದರೆ ಅಥವಾ ಉಗ್ರರ ಬೆದರಿಕೆಗೆ ಮಣಿದು ನೀಡಿದ್ದರೇ ಎಂಬ ಬಗ್ಗೆ ತನಿಖೆ ನಡೆದಿದೆ. ಉಗ್ರರು ಅಡಗಿದ್ದ ಭಾಗ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ದಟ್ಟ ಅರಣ್ಯದಿಂದ ಕೂಡಿದೆ. ಇದರಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.