ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2022, 6:10 IST
Last Updated 13 ಮಾರ್ಚ್ 2022, 6:10 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆ.

ಉಗ್ರನು ಅವಿತಿರುವ ಮಾಹಿತಿ ಅರಿತು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟ ಉಗ್ರನ ಮಾಹಿತಿ ಬರಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.