ಶ್ರೀನಗರ: ಇಲ್ಲಿನ ಸಫಕದಲ್ ಪ್ರದೇಶದ ಐವಾ ಸೇತುವೆ ಬಳಿ ಶನಿವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಜಮ್ಮು–ಕಾಶ್ಮೀರ ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗುಲಾಂ ಹಸನ್ ದಾರ್ ಗಾಯಗೊಂಡ ಕಾನ್ಸ್ಟೆಬಲ್.
‘ಬೆಳಿಗ್ಗೆ 8.40 ಸುಮಾರಿಗೆ ಗುಲಾಂ ಹಸನ್ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ದಾಳಿ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ದಾಳಿಕೋರರ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.