ADVERTISEMENT

ಕಾಶ್ಮೀರದ ಬಂಡಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2025, 4:08 IST
Last Updated 28 ಆಗಸ್ಟ್ 2025, 4:08 IST
<div class="paragraphs"><p>&nbsp;ಸಾಂಕೇತಿಕ ಚಿತ್ರ</p></div>

 ಸಾಂಕೇತಿಕ ಚಿತ್ರ

   

ಶ್ರೀನಗರ: ಉತ್ತರ ಕಾಶ್ಮೀರದ ಗುರೇಜ್ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ಭಾರತೀಯ ಸೇನೆಯು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ

ಖಚಿತ ಮಾಹಿತಿ ಮೇರೆಗೆ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು ಎಂದು ಶ್ರೀನಗರದ ಚಿನಾರ್‌ ಕಾರ್ಪ್ಸ್‌ ತಿಳಿಸಿದೆ.

ADVERTISEMENT

ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿ ದಾಳಿ ನಡೆಸಿದ ಯೋಧರೂ ಇಬ್ಬರನ್ನು ಹೊಡೆದುರುಳಿಸಿದರು ಎಂದು ‘ಎಕ್ಸ್‌’ ಪೋಸ್ಟ್‌ನಲ್ಲಿ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರವೂ ಇದೇ ವಲಯದಲ್ಲಿ ಗಡಿ ನುಸುಳುವಿಕೆ ಯತ್ನ ನಡೆದಿತ್ತು. ಕಣಿವೆಯಲ್ಲಿ ಭಯೋತ್ಪಾದಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರೂ ಗುರೇಜ್, ಉರಿ ಮತ್ತು ಕುಪ್ವಾರ ಸೆಕ್ಟರ್‌ಗಳಲ್ಲಿ ಪದೇ–ಪದೇ ಗಡಿ ನುಸುಳುವ ಯತ್ನ ನಡೆಯುತ್ತಲೇ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾದಲ್ಲಿ ಕರ್ತವ್ಯನಿರತ ಯೋಧ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಕರ್ತವ್ಯನಿರತ ಯೋಧ ಹವಾಲ್ದಾರ್ ಇಕ್ಬಾಲ್ ಅಲಿ ಮೃತಪಟ್ಟಿದ್ದಾರೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.