ADVERTISEMENT

17ರಂದು ‘ಪ್ರಜಾವಾಣಿ’ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 19:50 IST
Last Updated 8 ನವೆಂಬರ್ 2018, 19:50 IST
   

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ನಿವಾಸಿಗಳೇ, ನಿಮ್ಮ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆಯೇ? ರಸ್ತೆ ಗುಂಡಿಗಳು ಹಾಗೇ ಇವೆಯೇ? ಕಸ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲವೇ?

ಹಾಗಾದರೆ, ಜಯನಗರ 5ನೇ ‘ಟಿ‘ ಬ್ಲಾಕ್‌ನಲ್ಲಿರುವ ಜಿಎನ್‌ಆರ್‌ ಕಲ್ಯಾಣ ಮಂಟಪಕ್ಕೆ ನವೆಂಬರ್‌ 17ರಂದು ಬನ್ನಿ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ನಿಮ್ಮ ದೂರುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ADVERTISEMENT

ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶ ಬಳಸಿಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.17ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಕುಂದು ಕೊರತೆಗಳನ್ನು ಮುಂಚಿತವಾಗಿ janaspandana@printersmysore.co.inಗೆ ಇ–ಮೇಲ್‌ ಕೂಡ ಮಾಡಬಹುದು. ಮಾಹಿತಿಗೆ: 94485 28998

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.