ADVERTISEMENT

Jharkhand Election Results Highlight: ‘ಇಂಡಿಯಾ’ಗೆ ಸ್ಪಷ್ಟ ಬಹುಮತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ನವೆಂಬರ್ 2024, 2:12 IST
Last Updated 23 ನವೆಂಬರ್ 2024, 2:12 IST
<div class="paragraphs"><p>ಚಂಪೈ ಸೊರೇನ್ ಮತ್ತು ಹೇಮಂತ್‌ ಸೋರೇನ್</p></div>

ಚಂಪೈ ಸೊರೇನ್ ಮತ್ತು ಹೇಮಂತ್‌ ಸೋರೇನ್

   

–ಪಿಟಿಐ ಚಿತ್ರಗಳು

ನವದೆಹಲಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಅಂತ್ಯಗೊಂಡಿದ್ದು, 54 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಜಯ ಸಾಧಿಸಿದೆ. ಪ್ರತಿಪಕ್ಷ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದಿದೆ.

ADVERTISEMENT

ಉಳಿದಂತೆ ಸಿಪಿಐ(ಎಂಎಲ್‌) (ಎಲ್‌) 2 ಸ್ಥಾನಗಳಲ್ಲಿ, ಎಲ್‌ಜೆಪಿಆರ್‌ವಿ, ಜೆಎಲ್‌ಕೆಎಮ್‌, ಎಜೆಎಸ್‌ಯುಪಿ, ಜೆಡಿಯು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿವೆ.

‘ಇಂಡಿಯಾ‘ ಮಿತ್ರಪಕ್ಷಗಳ ಪೈಕಿ ಜೆಎಂಎಂ 34 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್‌ 16 ಸ್ಥಾನಗಳನ್ನು ಮತ್ತು ಆರ್‌ಜೆಡಿ 4 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ನ. 13ರಂದು ಜಾರ್ಖಂಡ್‌ನ 43 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು. ಜಾರ್ಖಂಡ್‌ನ ಎರಡನೇ ಹಂತದಲ್ಲಿ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆದಿತ್ತು.

ಜಾರ್ಖಂಡ್ ಚುನಾವಣಾ ಫಲಿತಾಂಶದ ಹೈಲೈಟ್ಸ್...

  • ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ 51 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

  • ಬಿಜೆಪಿ ನೇತೃತ್ವದ ‘ಎನ್‌ಡಿಎ’ ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

  • 81 ಸದಸ್ಯಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರಕ್ಕೆ 41 ಶಾಸಕರ ಅಗತ್ಯವಿದೆ.

  • ಬರ್ಹೈತ್‌ ಕ್ಷೇತ್ರದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ, ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಅವರು ಬಿಜೆಪಿ ಅಭ್ಯರ್ಥಿ ಗಮಾಲಿಯೆಲ್‌ ಹೆಂಬ್ರಮ್‌ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

  • ಹೇಮಂತ್‌ ಸೊರೇನ್‌ ಅವರ ಪತ್ನಿ, ಕಲ್ಪನಾ ಸೊರೇನ್‌ ಅವರು ಗಾಂಡೇಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಯಾ ದೇವಿ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.

  • ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಚಂಪೈ ಸೊರೇನ್‌ ಅವರು ಸರೈಕೆಲಾ ಕ್ಷೇತ್ರದಲ್ಲಿ 26 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

  • ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಭ್ಯರ್ಥಿಗಳು ಸ್ಪರ್ಧಿಸಿದ್ದ ಆರು ಸ್ಥಾನಗಳ ಪೈಕಿ ಐದರಲ್ಲಿ ಮುನ್ನಡೆ ಸಾಧಿಸಿರುವುದು ವಿಶೇಷ.

  • ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ, ಜೆಎಂಎಂ ಮುಂದಾಳತ್ವದ ‘ಇಂಡಿಯಾ’ ಮೈತ್ರಿಕೂಟ ಮತ್ತೆ ಅಧಿಕಾರದ ಗದ್ದುಗೆ ಏರುವುದನ್ನು ತಡೆಯುವ ವಿಶ್ವಾಸದಲ್ಲಿದೆ.

  • ‘ಇಂಡಿಯಾ’ ಮೈತ್ರಿಕೂಟ ಮತ್ತೆ ಅಧಿಕಾರ ಬರುವ ಸಾಧ್ಯತೆಗಳು ಕ್ಷೀಣ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಒಂದು ವೇಳೆ, ಬಹುಮತ ಪಡೆದಲ್ಲಿ, ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ 2ನೇ ಅವಧಿಗೆ ಮುಖ್ಯಮಂತ್ರಿಯಾಗುವರು ಎನ್ನಲಾಗುತ್ತಿದೆ. 

  • ಒಂದು ವೇಳೆ, ಎನ್‌ಡಿಎಗೆ ಬಹುಮತ ಸಿಕ್ಕಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಬಿಜೆಪಿ ಬಹಿರಂಗಪಡಿಸಿಲ್ಲ.

  • ಜನಾದೇಶ ತಮ್ಮ ಪರವಾಗಿಯೇ ಇರಲಿದೆ ಎಂದು ಎನ್‌ಡಿಎ ಹಾಗೂ ‘ಇಂಡಿಯಾ’ ಒಕ್ಕೂಟ ಎರಡೂ ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಸೋಮವಾರದಿಂದ ಆರಂಭವಾಗಲಿರುವ ಸಂಸತ್‌ನ ಚಳಿಗಾಲದ ಅಧಿವೇಶನದ ಮೇಲೂ ಈ ಫಲಿತಾಂಶವು ಪ್ರಭಾವ ಬೀರುವ ನಿರೀಕ್ಷೆ ಇದೆ.

  • ಜಾರ್ಖಂಡ್‌ ವಿಧಾನಸಭೆಯ ಒಟ್ಟು 81 ಕ್ಷೇತ್ರಗಳ ಪೈಕಿ 68 ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದವುಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.