ADVERTISEMENT

ಜಸ್ವಂತ್‌ ಸಿಂಗ್ ಪುತ್ರ ಮಾನವೇಂದ್ರ ಸಿಂಗ್ ಕಾಂಗ್ರೆಸ್‌ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2018, 10:04 IST
Last Updated 17 ಅಕ್ಟೋಬರ್ 2018, 10:04 IST
   

ನವದೆಹಲಿ: ಹಿರಿಯ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಪುತ್ರ, ಮಾಜಿ ಶಾಸಕ ಮಾನವೇಂದ್ರ ಸಿಂಗ್ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ರಾಜಸ್ಥಾನ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಸಚಿನ್‌ ಪೈಲೆಟ್‌ ಮಾನವೇಂದ್ರ ಸಿಂಗ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಮಾನವೇಂದ್ರ ಸಿಂಗ್ ಪಕ್ಷ ಸೇರಿರುವುದು ಕಾಂಗ್ರೆಸ್‌ಗೆ ಬಲ ಬಂದಂತಾಗಿದೆ ಎಂದು ಅವರು ಹೇಳಿದರು.

ಬಾರ್ಮರ್‌ ಮತ್ತು ಜೈಸಲ್ಮರ್ ಪ್ರಾಂತ್ಯದ ರಜಪೂತರ ಮತಗಳನ್ನು ಕಾಂಗ್ರೆಸ್‌ನತ್ತಸೆಳೆಯುವ ತಂತ್ರವಾಗಿ ಮಾನವೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್‌ಗೆ ಸೆರ್ಪಡೆಮಾಡಿಕೊಳ್ಳಲಾಗಿದೆ. ಈ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ.

ADVERTISEMENT

54 ವರ್ಷದ ಮಾನವೇಂದ್ರ ಸಿಂಗ್‌ 2013ರಲ್ಲಿ ಬಾರ್ಮರ್ ಪ್ರಾಂತ್ಯದ ಶೆಯೊ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.

ಮಾನವೇಂದ್ರ ಸಿಂಗ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲ ಎಂದುಬಿಜೆಪಿ ನಾಯಕ ರಾಜೇಂದ್ರ ರಾಥೋರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಿಂದ ದೂರು ಉಳಿದಿರುವ ನಾಯಕರನ್ನು ತನ್ನತ್ತಸೆಳೆದುಕೊಳ್ಳುವುದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ ಆದರೆ ರಾಜಕೀಯವಾಗಿ ಈ ನಡೆ ಉತ್ತಮವಾದುದಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.