ಪ್ರಾತಿನಿಧಿಕ ಚಿತ್ರ
ಚಾಯ್ಬಾಸಾ: ಜಾರ್ಖಂಡ್ನ ಪಶ್ಚಿಮ ಸಿಂಘಬಮ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ (ಐಇಡಿ) ಸ್ಫೋಟಗೊಂಡು ಕನಿಷ್ಠ ಮೂವರು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ರಾಂಚಿಗೆ ಏರ್ಲಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮನೋಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸರಂದಾ ಅರಣ್ಯದ ಬಲಿವಾದಲ್ಲಿ ಈ ಘಟನೆ ನಡೆದಿದೆ. ಸಿಆರ್ಪಿಎಫ್ 197 ಬೆಟಾಲಿಯನ್ ಸಿಬ್ಬಂದಿ ಶೋಧ ಕಾರ್ಯಾಚರಣೆಗಾಗಿ ಅಲ್ಲಿಗೆ ಹೋದಾಗ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ ಎಂದು ಡಿಐಜಿ ಮನೋಜ್ ರತನ್ ಚೋಥೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.