ADVERTISEMENT

ಮಣಿಪುರ: ಸೇನಾ ಅಧಿಕಾರಿ ಅಪಹರಣ

ಪಿಟಿಐ
Published 8 ಮಾರ್ಚ್ 2024, 14:19 IST
Last Updated 8 ಮಾರ್ಚ್ 2024, 14:19 IST
   

ಇಂಫಾಲ್‌: ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ)ಯೊಬ್ಬರನ್ನು ಮಣಿಪುರದ ಥೌಬಾಲ್‌ ಜಿಲ್ಲೆಯ ಅವರ ನಿವಾಸದಿಂದ ಅಪಹರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಜೆಸಿಒ ಕೋನ್ಸಮ್‌ ಖೇದಾ ಸಿಂಗ್‌ ಅವರು ರಜೆಯ ಮೇಲೆ ಮನೆಗೆ ತೆರಳಿದ್ದರು. ಈ ವೇಳೆ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಅಪಹರಣ ಮಾಡಿದ್ದಾರೆ. ಇದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಆದರೆ ಸುಲಿಗೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಇದಕ್ಕೂ ಮುನ್ನ ಸಹ ಅವರ ಕುಟುಂಬಕ್ಕೆ ಇಂಥ ಬೆದರಿಕೆಗಳು ಬಂದಿದ್ದವು ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಜೆಸಿಒ ರಕ್ಷಣೆಗಾಗಿ ಭದ್ರತಾ ಪಡೆಯು ಶೋಧ ಕಾರ್ಯವನ್ನು ಆರಂಭಿಸಿದೆ. ರಾಷ್ಟ್ರೀಯ ಹೆದ್ದಾರಿ 102ರಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.

ADVERTISEMENT

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ ನಂತರ ಯೋಧರನ್ನು ಅಪಹರಣ ಮಾಡುತ್ತಿರುವ ನಾಲ್ಕನೇ ಪ್ರಕರಣ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.