ಅಹಮದಾಬಾದ್: ಕರ್ನಾಟಕದಲ್ಲಿ ಜೆಡಿಎಸ್ ಅಳಿವಿನಂಚಿನಲ್ಲಿದ್ದು, ವಿಧಾನಸಭಾ ಚುನಾವಣೆಯ ನಂತರ ಅಸ್ತಿತ್ವವನ್ನು ಪೂರ್ಣವಾಗಿ ಕಳೆದುಕೊಳ್ಳಲಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ‘ಸರ್ವಾಧಿಕಾರಿ ಹಿಟ್ಲರ್ ಸಂಪುಟದ ಗೊಬೆಲ್ನ ಹೊಸ ಅವತಾರ’ ಎಂದು ಟೀಕಿಸಿರುವುದಕ್ಕೆ ತೀವ್ರವಾಗಿ ಆಕ್ಷೇಪಿಸಿದರು.
ಕುಮಾರಸ್ವಾಮಿ ಅವರು ಅಸಂಸದೀಯ ಪದ ಬಳಸಿರುವುದು ಅವರು ರಾಜಕೀಯವಾಗಿ ಭ್ರಮನಿರಸನಗೊಂಡಿರುವುದರ ಸಂಕೇತ. ಚುನಾವಣೆ ಬಳಿಕ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂಬ ಕಾರಣಕ್ಕೆ ಹೀಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.