ADVERTISEMENT

ಭಯೋತ್ಪಾದನಾ ಕೃತ್ಯಕ್ಕೆ ಸಂಚು: ಜೆಇಎಂ ಎಂಟು ಸಹಚರರ ಬಂಧನ

ಪಿಟಿಐ
Published 24 ಮೇ 2022, 17:15 IST
Last Updated 24 ಮೇ 2022, 17:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜೈಶ್‌ ಇ ಮೊಹಮ್ಮದ್‌ (ಜೆಇಎಂ) ಸಂಘಟನೆಯು ಪುಲ್ವಾಮಾ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಭಯೋತ್ಪಾದನಾ ಕೃತ್ಯದ ಸಂಚನ್ನು ಭೇದಿಸಿರುವ ಭದ್ರತಾ ಪಡೆಯು, ಈ ಸಂಘಟನೆಯ ಎಂಟು ಮಂದಿ ಸಹಚರರನ್ನು ಬಂಧಿಸಿದೆ.

ದಕ್ಷಿಣ ಕಾಶ್ಮೀರದ ಅವಂತಿಪೋರಾ ವಲಯದಲ್ಲಿ ಕೃತ್ಯ ನಡೆಸಲು ಸಂಚು ನಡೆದಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಯಿತು. ಬಂಧಿತರಿಂದ ಶಸ್ತ್ರಾಸ್ತ್ರಗಳು ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT