ಮುಂಬೈ (ಪಿಟಿಐ): ಬಾಕಿ ವೇತನ ಪಾವತಿಸುವ ಸಂಬಂಧ ಪ್ರವರ್ತಕರು ಮತ್ತು ಬ್ಯಾಂಕ್ಗಳಿಂದ ಯಾವುದೇ ಸೂಚನೆ ಇಲ್ಲ ಎಂದು ಜೆಟ್ ಏರ್ವೇಸ್ ಸಂಸ್ಥೆಯ ಸಿಇಒ ವಿನಯ್ ದುಬೆ ಅವರು ಸಿಬ್ಬಂದಿಗೆ ತಿಳಿಸಿದ್ದಾರೆ.
‘ಸಿಬ್ಬಂದಿಗೆ ವೇತನ ಬಾಕಿ ಪಾವತಿಸುವ ಕುರಿತು ಪ್ರವರ್ತಕರು ಮತ್ತು ಬ್ಯಾಂಕ್ಗಳು ಬದ್ಧತೆ
ತೋರಿಸದೇ ಇರುವುದು ದುಖಕರ’ ಎಂದಿದ್ದಾರೆ.
‘ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪದೇ ಪದೇ ಬ್ಯಾಂಕ್ಗಳ ಗಮನಕ್ಕೆ ತರಲಾಗುತ್ತಿದೆ. ಹೀಗಿದ್ದರೂಬಿಡ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ವೇತನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.