ADVERTISEMENT

ಮಾನಸಿಕ ರೋಗಿಯಿಂದ ಐವರ ಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 18:20 IST
Last Updated 23 ಫೆಬ್ರುವರಿ 2019, 18:20 IST

ಜೆಮ್‌ಶೆಡ್‌ಪುರ (ಜಾರ್ಖಂಡ್‌): ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ತನ್ನದೆ ಕುಟುಂಬದ ಐವರನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ಸಾರಾಕೆಲಾ-ಖಾರ್ಸ್ವಾನ್ ಜಿಲ್ಲೆಯ ಪುದುಸಿಲ್ಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಆರೋಪಿ ಚುನು ಸೊರೆನ್‌ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯು ತನ್ನ ಸಹೋದರ ರವಿ ಸೊರೆನ್‌ (45), ನಾದಿನಿ ಕಲ್ಪನಾ (39) ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಆರೋಪಿಯು ತನ್ನ ತಾಯಿ ಮತ್ತು ಕಿರಿಯ ಸಹೋದರನ ಮೇಲೂ ದಾಳಿ ಮಾಡಿದ್ದು, ಇಬ್ಬರೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಗೊಂಡಿರುವ ಈ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ಪತ್ನಿ ಮತ್ತು ಮಕ್ಕಳು ದಾಳಿಗೆ ಸಿಗದೆ, ತಪ್ಪಿಸಿಕೊಂಡಿದ್ದು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಚಾಂದಿಲ್‌ ಉಪ ವಿಭಾಗದ ಪೊಲೀಸ್‌ ಅಧಿಕಾರಿ (ಎಸ್‌ಡಿಪಿಒ) ಡಿ.ಎನ್‌.ಬಂಕಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.