ADVERTISEMENT

ಜಾರ್ಖಂಡ್‌ | ಬಸ್‌ ಕಮರಿಗೆ ಬಿದ್ದು ಆರು ಜನ ದುರ್ಮರಣ, 39 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 3:16 IST
Last Updated 25 ಜೂನ್ 2019, 3:16 IST
ಬಸ್‌ ಪಲ್ಟಿಯಾಗಿ ಕಮರಿಗೆ ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಚಿತ್ರ: ಎಎನ್‌ಐ ಟ್ವೀಟ್‌
ಬಸ್‌ ಪಲ್ಟಿಯಾಗಿ ಕಮರಿಗೆ ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಚಿತ್ರ: ಎಎನ್‌ಐ ಟ್ವೀಟ್‌    

ರಾಂಚಿ:ಜಾರ್ಖಂಡ್‌ನ ಗರ್ಹ್ವಾ ಜಿಲ್ಲೆಯ ಸಮೀಪ ಸೋಮವಾರ ಬೆಳಿಗ್ಗೆ ಬಸ್‌ವೊಂದು ಕಮರಿಗೆ ಬಿದ್ದು ಆರು ಜನ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 39 ಜನ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT