ಶ್ರೀನಗರ: ನಗರದ ನೌಹಾತ್ವ ಪ್ರದೇಶದ ಜಾಮಿಯಾ ಮಸೀದ ಸಮೀಪದಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿರುವ ಅಥವಾ ಗಾಯಗೊಂಡಿರುವ ಕುರಿತು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ ಸಂಭವಿಸಿದ ಈ ಘಟನೆಯಲ್ಲಿ ಸುಧಾರಿತ ಸ್ಪೋಟಕಗಳನ್ನು (ಐಎಡಿ) ಬಳಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.