ನವದೆಹಲಿ: ‘ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ವಿಶ್ವವಿದ್ಯಾಲಯದ ಆಡಳಿತವು ತಮಗೆ ₹ 10ರಿಂದ ₹ 15 ಸಾವಿರದ ತನಕ ನಗದು ದಂಡ ವಿಧಿಸಿದ್ದು, ಮುಂದಿನ ಸೆಮಿಸ್ಟರ್ಗೆ ಪ್ರವೇಶ ನಿರಾಕರಿಸಿದೆ’ ಎಂದುದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಒಂದು ಗುಂಪು ಆರೋಪಿಸಿದೆ.
ವಿಶ್ವವಿದ್ಯಾಲಯದ ಈ ಕ್ರಮವು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಉದ್ದೇಶವನ್ನು ಹೊಂದಿದೆ ಎಂದೂ ವಿದ್ಯಾರ್ಥಿಗಳು ದೂರಿದ್ದಾರೆ.
ಆದರೆ,ಜೆಎನ್ಯು ಮುಖ್ಯ ಪ್ರಾಕ್ಟರ್ (ವಿದ್ಯಾರ್ಥಿಗಳ ಮೇಲ್ವಿಚಾರಕ) ರಜನೀಶ್ ಕುಮಾರ್ ಮಿಶ್ರಾ ಅವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.