ADVERTISEMENT

ನಂದಿಗ್ರಾಮ ಫಲಿತಾಂಶಕ್ಕೆ ಮಮತಾ ತಕರಾರು: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜೂನ್ 2021, 9:59 IST
Last Updated 24 ಜೂನ್ 2021, 9:59 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ತಕರಾರು ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಕೋಲ್ಕತ್ತ ಹೈಕೋರ್ಟ್ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಕೌಶಿಕ್‌ ಚಂದ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಆದರೆ, ನ್ಯಾಯಮೂರ್ತಿ ಕೌಶಿಕ್‌ ಚಂದ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ತಕರಾರು ಅರ್ಜಿಯ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ನ್ಯಾಯಮೂರ್ತಿಗಳು ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ನಮಗೆ ನ್ಯಾಯ ಸಿಗುವ ಭರವಸೆ ಇಲ್ಲವೆಂದು ಮಮತಾ ಹೇಳಿದ್ದಾರೆ. ಈ ವಿಚಾರವಾಗಿ ಹೈಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಮಮತಾ ಅವರ ಆರೋಪದ ಹಿನ್ನೆಲೆಯಲ್ಲಿ ತೀರ್ಪನ್ನು ಕಾಯ್ದಿರಿಸಲಾಗಿದೆ. ತೀರ್ಪು ಹೊರಬೀಳುವ ದಿನಾಂಕವನ್ನು ನ್ಯಾಯಪೀಠವು ಇನ್ನೂ ನಿಗದಿಪಡಿಸಿಲ್ಲ.

ADVERTISEMENT

‘ಇವಿಎಂಗಳ ದುರ್ಬಳಕೆ ಮಾಡಲಾಗಿದೆ. ಮತಗಳ ಮರು ಎಣಿಕೆ ಮಾಡಬೇಕು ಎಂಬ ನನ್ನ ಮನವಿಯನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ’ ಎಂದು ಮಮತಾ ಬ್ಯಾನರ್ಜಿ ಅವರು ದೂರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.