ADVERTISEMENT

ನ್ಯಾಯಾಂಗ ನಿಂದನೆ ಅರ್ಜಿ ಇತ್ಯರ್ಥ

ಗೋಕರ್ಣ ದೇವಸ್ಥಾನ ಹಸ್ತಾಂತರ:

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2018, 19:23 IST
Last Updated 30 ನವೆಂಬರ್ 2018, 19:23 IST

ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಪಾಲಿಸಿದ್ದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಾಮಚಂದ್ರಾಪುರ ಮಠವು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಇತ್ಯರ್ಥಪಡಿಸಿದೆ.

ನವೆಂಬರ್‌ 1ರ ಕೋರ್ಟ್‌ ಆದೇಶದ ಮೇರೆಗೆ ದೇವಸ್ಥಾನಕ್ಕೆ ಸಂಬಂಧಿಸಿದ ಚರಾಸ್ತಿ ಹಾಗೂ ಎಲ್ಲ ಪ್ರಮುಖ ದಾಖಲೆಗಳನ್ನು ನವೆಂಬರ್‌ 3ರಂದೇ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT