ADVERTISEMENT

ನ್ಯಾಯಾಂಗ ನಿಂದನೆ:‌ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 19:24 IST
Last Updated 29 ಆಗಸ್ಟ್ 2020, 19:24 IST
ಪ್ರಶಾಂತ್ ಭೂಷಣ್ 
ಪ್ರಶಾಂತ್ ಭೂಷಣ್    

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಹಿರಿಯ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್ ಅವರ ಶಿಕ್ಷೆಯ ಪ್ರಮಾಣವನ್ನು ಸುಪ್ರೀಂ ಕೋರ್ಟ್ಸೋಮವಾರ ಪ್ರಕಟಿಸಲಿದೆ.

ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಸೋಮವಾರ ಬೆಳಗ್ಗೆ 10.30ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಕೃಷ್ಣ ಮುರಾರಿ ಕೂಡ ಈ ಪೀಠದಲ್ಲಿದ್ದಾರೆ.

ಸುಪ್ರೀಂಕೋರ್ಟ್‌ ಮತ್ತು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ವಿರುದ್ಧ ಟ್ವೀಟ್‌ ಮಾಡಿದ್ದ ಪ್ರಶಾಂತ್‌ ಭೂಷಣ್‌ ವಿರುದ್ಧ ನ್ಯಾಯಾಲಯ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು. ಭೂಷಣ್‌ ಅವರನ್ನು ತಪ್ಪಿತಸ್ಥರು ಎಂದು ಆಗಸ್ಟ್‌ 14ರಂದು ತೀರ್ಪು ನೀಡಿದ್ದ ತ್ರಿಸದಸ್ಯ ಪೀಠವು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.