ADVERTISEMENT

ಮಹದಾಯಿ: ನ್ಯಾಯಾಂಗ ನಿಂದನೆ ದೂರು, ವಿಚಾರಣೆಯಿಂದ ನ್ಯಾಯಮೂರ್ತಿ ನಜೀರ್ ಹಿಂದಕ್ಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 7:21 IST
Last Updated 25 ನವೆಂಬರ್ 2019, 7:21 IST
ನ್ಯಾಯಮೂರ್ತಿ ಅಬ್ದುಲ್ ನಜೀರ್
ನ್ಯಾಯಮೂರ್ತಿ ಅಬ್ದುಲ್ ನಜೀರ್   

ನವದೆಹಲಿ: ಕರ್ನಾಟಕವು ಮಹದಾಯಿ ಯೋಜನೆಗಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ನಡೆಸುತ್ತಿದ್ದು, ನ್ಯಾಯಾಂಗ ನಿಂದನೆಯಾಗಿದೆ ಎಂದು ದೂರಿ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಅಬ್ದುಲ್‌ ನಜೀರ್ ಹಿಂದಕ್ಕೆ‌ ಸರಿದಿದ್ದಾರೆ.

ಗೋವಾ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿ ವಿಚಾರಣೆ ಸೋಮವಾರ ಆರಂಭ ಆಗುವ‌ ಮುನ್ನ ಕರ್ನಾಟಕ ಮೂಲದ ನ್ಯಾಯಮೂರ್ತಿ‌ ಎಸ್.ಅಬ್ದುಲ್ ‌ನಜೀರ್ ಪ್ರಕರಣದಿಂದ ಹಿಂದಕ್ಕೆ ಸರಿದರು.

ಮುಖ್ಯ ನ್ಯಾಯಮೂರ್ತಿಯವರು ಬೇರೊಂದು ಪೀಠಕ್ಕೆ ಈ ಪ್ರಕರಣದ‌ ವಿಚಾರಣೆ ವಹಿಸಲಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.