ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ದೇಶದಾದ್ಯಂತ ಪ್ರತಿಭಟನೆಯ ಕಿಚ್ಚು ಜೋರಾಗಿರುವ ನಡುವೆಯೇ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಅವರು ಭಾರತೀಯ ಕ್ರೀಡಾಪಟುಗಳಿಗೆ ‘ಹಿಂಸೆಯನ್ನು ಖಂಡಿಸಿ’ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ವಿಡಿಯೊ ಹಾಕಿರುವ ಗುಟ್ಟಾ ಅವರು ದೇಶದ ಕ್ರೀಡಾಪಟುಗಳನ್ನು ‘ಶಾಂತಿ ರಾಯಭಾರಿ’ಗಳು ಎಂದು ಕರೆದಿದ್ದಾರೆ.
‘ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿರುವ ಸುದ್ದಿಗಳನ್ನು ನಾವು ನೋಡುತ್ತಿದ್ದೇವೆ ಮತ್ತು ಅದರಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಜನರ ಮೇಲೆ ಆಗುತ್ತಿರುವ ಹಿಂಸೆ ಮತ್ತು ಹಿಂಸೆಯನ್ನು ಸೃಷ್ಟಿಸುತ್ತಿರುವ ಜನರು. ಇತಂಹ ಸ್ಥಿತಿಯನ್ನು ನಾನು ನಿರೀಕ್ಷಿಸಿರಲಿಲ್ಲ. ದಯವಿಟ್ಟು ಎಲ್ಲಾ ಕ್ರೀಡಾಪಟುಗಳು ಹೊರಬಂದು, ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿ. ಏಕೆಂದರೆ ನಾವು, ಈ ದೇಶದ ಶಾಂತಿ ರಾಯಭಾರಿಗಳು. ಕನಿಷ್ಠ ಇದನ್ನಾದರೂ ನಾವು ಮಾಡಬಹುದು’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.