ADVERTISEMENT

ಐಎಎಸ್‌ ಅಧಿಕಾರಿ ಕೈಲಾಷ್‌ ರಾಜೀನಾಮೆ

ಅರುಣಾಚಲ ಪ್ರದೇಶಕ್ಕೆ ವರ್ಗಾವಣೆಗೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 18:23 IST
Last Updated 7 ಸೆಪ್ಟೆಂಬರ್ 2019, 18:23 IST

ದೆಹಲಿ: ವರ್ಗಾವಣೆ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸಿದ ಧೋರಣೆಗೆ ಆಕ್ಷೇಪ ವ್ಯಕ್ತಪಡಿಸಿ ಐಎಎಸ್‌ ಅಧಿಕಾರಿ ಕೈಲಾಷ್‌ ಮಿತ್ತಲ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್‌ ಅವರ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಿತ್ತಲ್‌ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆಮಾಡಲಾಗಿತ್ತು.

ಇದರಿಂದ ಅಸಮಾಧಾನಗೊಂಡಿದ್ದರು ಎಂದು ‘ದಿ ಪ್ರಿಂಟ್‌’ ವೆಬ್‌ಸೈಟ್‌ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.