ADVERTISEMENT

ಹೊಂದಾಣಿಕೆಗೆ ಸಿದ್ಧ: ಕಮಲ್‌

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 19:46 IST
Last Updated 16 ಜನವರಿ 2019, 19:46 IST

ಚೆನ್ನೈ: ತಮಿಳುನಾಡು ಅಭಿವೃದ್ಧಿ ಪರ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಮಾನ ಮನಸ್ಕ ಪಕ್ಷಗಳ ಜತೆ ಕೈಜೋಡಿಸಲು ಸಿದ್ಧ ಎಂದು ನಟ ಮತ್ತು ಮಕ್ಕಳ ನೀಧಿ ಮೈಯ್ಯಂ (ಎಂಎನ್‌ಎಂ) ಸ್ಥಾಪಕ ಕಮಲ್ ಹಾಸನ್‌ ಘೋಷಿಸಿದ್ದಾರೆ.

ಪೊಳ್ಳಾಚಿಯಲ್ಲಿ ಬುಧವಾರ ಪಕ್ಷದ ಕಚೇರಿ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಾವು ಲೋಕಸಭೆಗೆ ಸ್ಪರ್ಧಿಸುವ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.