ಚೆನ್ನೈ: ತಮಿಳುನಾಡು ಅಭಿವೃದ್ಧಿ ಪರ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಮಾನ ಮನಸ್ಕ ಪಕ್ಷಗಳ ಜತೆ ಕೈಜೋಡಿಸಲು ಸಿದ್ಧ ಎಂದು ನಟ ಮತ್ತು ಮಕ್ಕಳ ನೀಧಿ ಮೈಯ್ಯಂ (ಎಂಎನ್ಎಂ) ಸ್ಥಾಪಕ ಕಮಲ್ ಹಾಸನ್ ಘೋಷಿಸಿದ್ದಾರೆ.
ಪೊಳ್ಳಾಚಿಯಲ್ಲಿ ಬುಧವಾರ ಪಕ್ಷದ ಕಚೇರಿ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಾವು ಲೋಕಸಭೆಗೆ ಸ್ಪರ್ಧಿಸುವ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.