ADVERTISEMENT

ರಾಜ್ಯಪಾಲರನ್ನು ಭೇಟಿಯಾದ ಕಂಗನಾ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 19:09 IST
Last Updated 13 ಸೆಪ್ಟೆಂಬರ್ 2020, 19:09 IST
ಕಂಗನಾ
ಕಂಗನಾ   

ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ನಟಿ ಕಂಗನಾ ರನೌತ್ ‌ನಡುವಿನ ಜಟಾಪಟಿ ಮುಂದುವರಿದಿದ್ದು, ಕಂಗನಾ ಅವರು ಭಾನುವಾರ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜಭವನದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ,‘ನಮ್ಮ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಸಾಮಾನ್ಯ ಪ್ರಜೆಯಾಗಿ ಅವರನ್ನು ಭೇಟಿಯಾದೆ. ಅವರು ನನ್ನನ್ನು ಮಗಳಂತೆ ಕಂಡರು’ ಎಂದು ತಿಳಿಸಿದ್ದಾರೆ.

‘ನನಗಾದ ಅನ್ಯಾಯದ ಕುರಿತು ರಾಜ್ಯಪಾಲರಿಗೆ ತಿಳಿಸಿದ್ದೇನೆ. ಸರ್ಕಾರ ನನ್ನ ವಿರುದ್ಧ ಅನುಚಿತ ಮತ್ತು ಅಸಭ್ಯ ವರ್ತನೆ ತೋರಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.