ADVERTISEMENT

ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಶಯ ಕೋರಿದ ಮೋದಿ, ಕೋವಿಂದ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2018, 4:21 IST
Last Updated 1 ನವೆಂಬರ್ 2018, 4:21 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 63ನೇ ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.